ಗಿರೀಶ್ ಕಾರ್ನಾಡ ರವರ ಆತ್ಮ ಕಥೆಯನ್ನು ಓದಿ ಕೊಂದು ಅವರಿಗೆ ಪ್ರತಿಕ್ರಿಯಿಸ ಬೇಕೆಂಬ ಉತ್ಸುಕತೆಯಲ್ಲಿ ಕಾರ್ನಾಡ ರಿಗೆ ಹೀಗೆ ಕೆಳಗಿನಂತೆ ಬರೆದಾಗ
ಮಿ|| ಜಂಟಲ್ ಮ್ಯಾನ್
ಗುರುರಾಜ್
ಅದಕ್ಕೆ ಕಾರ್ನಾಡರು ಪ್ರತಿಕ್ರಿಯಿಸಿದ್ದು
ಗಿರೀಶ್ ಕಾರ್ನಾಡ್
ಮಿ|| ಜಂಟಲ್ ಮ್ಯಾನ್
"ಆಡಾಡತ ಆಯುಷ್ಯ " ದಲ್ಲಿ ನಿಮ್ಮ ಪಯಣವನ್ನು ಓದಿ ಹೇಗೆ ಪ್ರತಿಕ್ರಿಯಿಸ ಬೇಕೆಂದು ತಿಳಿಯದೆ ನನ್ನಿಂದ ಶಬ್ದಗಳೇ ಹೊರಡುತ್ತಿಲ್ಲ. ನಿಮ್ಮ ಈ ಬರವಣಿಗೆಯಲ್ಲಿ ನನ್ನನ್ನು ನಾನು ಕಂಡುಕೊಳ್ಳುತ್ತಿದ್ದೇನೆ. ಕಾರಂತರ ಪಲಾಯನ , ನಿಮ್ಮ oup ನಲ್ಲಿ , ಚಿತ್ರಪಟ , ಬರವಣಿಗೆ ಹೀಗೆ ಎಲ್ಲವೂ ನನ್ನನ್ನು ಕಾಡುತ್ತವೆ. ಈ ಮೊದಲು ಕಾರಂತರನ್ನು ಓದಿ ಕೊಂಡು ನಾನು ಓಡಿದ್ದೆ. ಆದರೆ ಒಳ್ಳೆ ಸ್ನೇಹಿತನ ಮನೆಯಲ್ಲಿ ಆಶ್ರಯ ಪಡೆದು ಅಂದು ಕೊಂಡ ಕ್ಷೇತ್ರದಲ್ಲಿ ಸಣ್ಣದಾಗಿ ಪಯಣವಂತು ನಡದೇ ಇದೆ.
ಕ್ಷಮಿಸಿ ನಾನು ನಿಮ್ಮ ಮಗಳ ವಯಸ್ಸಿನವನು. ಭರವಸೆಯನ್ನು ಗಟ್ಟಿಯಾಗಿಯೇ ಇಟ್ಟುಕೊಂಡಿದ್ದೇನೆ. ನಿಮ್ಮ ಈ ಪುಸ್ತಕದ ಓದು ನನ್ನನ್ನು ಇನ್ನು ಹುರಿಗೊಳಿಸಲು ಸಹಾಯಕವಾಗಿದೆ ಎಂದು ತಿಳಿಸುತ್ತಾ ತಮ್ಮ ಮುಂದಿನ "ನೋಡುನೋಡುತ ದಿನಮಾನ" ಕಾಯುತ್ತೇನೆ. "
ಗುರುರಾಜ್
ಪ್ರಿಯ ಗುರುರಾಜ್,
ನಿಮ್ಮ ಪತ್ರಕ್ಕಾಗಿ ಆಭಾರಿ. "ಆಡಾಡತ ಆಯುಷ್ಯ " ಓದಿ ನಿಮಗೆ ಖುಷಿ ಯಾಯಿತೆಂದು ತಿಳಿದು ಸಂತೋಷವಾಯಿತು.
ಶುಭಾಶಯಗಳೊಂದಿಗೆ