ಮಂಗಳವಾರ, ಸೆಪ್ಟೆಂಬರ್ 15, 2015

ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪ್ರಥಮ

             

ಸರ್ ಎಂ ವಿಶ್ವೇಶ್ವರಯ್ಯ ನವರ ಜನ್ಮ ದಿನವಾದ ಇಂದು ಜಿಲ್ಲೆಯ ಸ.ಹಿ.ಪ್ರಾ.ಶಾಲೆ, ರೈಲ್ವೆ ನಿಲ್ದಾಣ, ಕೊಪ್ಪಳ ಇಲ್ಲಿ ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯ ವತಿಯಿಂದ ನಡೆದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಸ್ಥಳೀಯ ಜಹಗೀರ ಗುಡದೂರ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಗಳಿಸಿ, ವಿಭಾಗ ಮಟ್ಟಕ್ಕೆ ಆಯ್ಕೆ ಹೊಂದಿದ್ದಾರೆ. ತಾಲೂಕಿನಿಂದ ಪ್ರಥಮ ಹಾಗೂ ದ್ವಿತೀಯ ಸ್ಥಾನದಲ್ಲಿ ಆಯ್ಕೆಗೊಂಡ ನಾಟಕಗಳನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗಿತ್ತು. ನಾಲ್ಕು ತಾಲೂಕುಗಳಿಂದ ಒಟ್ಟು ಏಂಟು ತಂಡಗಳು ಇಂದು ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಉತ್ತಮ ನಟಿ ಗ್ಯಾನವ್ವ, ಮೊ.ವ.ನಿ.ಶಾಲೆ, ಕಾಟಪುರ ವಿದ್ಯಾರ್ಥಿನಿ ಪಡೆದರೆ, ಉತ್ತಮ ನಟ ಪ್ರಶಸ್ತಿಯನ್ನು ಲಕ್ಷ್ಮಣ ಗೊಲ್ಲರ, ಸ.ಪ್ರೌ.ಶಾಲೆ, ಜಹಗೀರಗುಡದೂರ ವಿದ್ಯಾರ್ಥಿ ಪಡೆದನು. ರಚನೆ, ನಿರ್ದೇಶನ ಈ ಎರಡು ಪ್ರಶಿಸ್ತಿಗಳನ್ನು ಶಿಕ್ಷಕರಾದ ಶ್ರೀ ಗುರುರಾಜ್ ಅವರು ಪಡೆದರು. ದ್ವಿತೀಯ ಬಹುಮಾನವನ್ನು ಮೊರಾರ್ಜಿ ಶಾಲೆ ಕಾಟಪುರ ಪಡೆದುಕೊಂಡಿದೆ.