ಶುಕ್ರವಾರ, ಫೆಬ್ರವರಿ 24, 2012
ಗುರುವಾರ, ಫೆಬ್ರವರಿ 23, 2012
ಮಂಗಳವಾರ, ಫೆಬ್ರವರಿ 21, 2012
ಅರಳು ಮೊಗ್ಗು
ಕವಿತೆ ಬರೆಯುವುದು ಪಾಂಡಿತ್ಯ ತೋರಿಸಲಿಕ್ಕಲ್ಲ
ಭಾವನೆಗಳನ್ನು ವ್ಯಕ್ತ ಪಡಿಸಲಿಕ್ಕೆ
---ಜಿ.ಕೆ.ಹೆಗಡೆ.
( ಕಾರ್ನಾಡರ "ಆಡಾಡತ ಆಯುಷ್ಯ" ದಿಂದ )
ಕಾವ್ಯ ಬಿ.ಬಿಂಗಿಕೊಪ್ಪದ
ನಮಗೆ ನಾಟಕ ಕಲಿಸಲು ಆಗಮಿಸಿದ ಶ್ರೀ ಗುರುರಾಜ ನಿರ್ದೇಶಕರಿಗೆ ಅಭಿನಂದನ ಸಲ್ಲಿಸ ಬಯಸುವೆ. ಇಡೀ ಜಿಲ್ಲೆಯಲ್ಲಿ ನಮ್ಮ ಶಾಲೆಯನ್ನು ಆರಿಸಿಕೊಂಡಿದ್ದು ಹೆಮ್ಮೆಯ ವಿಷಯವಾಗಿದೆ. ೧೫ ದಿನಗಳ ತರಬೇತಿ ಪಡೆದು ಆರು ವಿವಿಧ ಶಾಲೆಗಳಲ್ಲಿ ಪ್ರದರ್ಶಿಸಿದ ನಾಟಕ " ಕತ್ಲೆ ನಗರೀ ತಲೆಕೆಟ್ ರಾಜ " ನಮಗೊಂದು ಅದ್ಭುತ ಅನುಭವ ನೀಡಿತು.
ತರಬೇತಿ ಸಮಯದಲ್ಲಿ ಮುಖವಾಡ ತಯಾರಿಕೆ, ರಂಗಾಟ, ಬಣ್ಣದ ಆಟ, ಆಡಿಸುತ್ತಾ ನಾಟಕ ಕಟ್ಟಿ ಕೊಟ್ಟಿದ್ದು ತಿಳಿದೇ ನಾವು ನಾಟಕದ ಒಳಗೆ ಪ್ರವೇಶ ಮಾಡಿದ್ದೆವು. ನಾಟಕಗಳ ಪ್ರದರ್ಶನ ನಂತರ ನಾವು
ನಮ್ಮ ಯೋಚನೆ, ನಡವಳಿಕೆ, ಇತರರೊಂದಿಗೆ ಸಂಬಂಧದಲ್ಲಿ ಆದ ಬದಲಾವಣೆ ಊಹಿಸದಂತೆ ಪರಿವರ್ತನೆ ಆದದ್ದು. ಇಂಥಹ ಒಂದು ವಿಷಯ ನಮ್ಮ ಪ್ರತಿಯೊಂದು ಶಾಲೆಯಲ್ಲಿ ದೊರಕಿದರೆ ನಾವು ನಾಡಿನ ಆದರ್ಶ ಸತ್ ಪ್ರಜೆ ಆಗಬಹುದು.
ಶನಿವಾರ, ಫೆಬ್ರವರಿ 18, 2012
ಕಾರ್ನಾಡರಿಗೆ ಒಂದು ಪತ್ರ
ಗಿರೀಶ್ ಕಾರ್ನಾಡ ರವರ ಆತ್ಮ ಕಥೆಯನ್ನು ಓದಿ ಕೊಂದು ಅವರಿಗೆ ಪ್ರತಿಕ್ರಿಯಿಸ ಬೇಕೆಂಬ ಉತ್ಸುಕತೆಯಲ್ಲಿ ಕಾರ್ನಾಡ ರಿಗೆ ಹೀಗೆ ಕೆಳಗಿನಂತೆ ಬರೆದಾಗ
ಮಿ|| ಜಂಟಲ್ ಮ್ಯಾನ್
ಗುರುರಾಜ್
ಅದಕ್ಕೆ ಕಾರ್ನಾಡರು ಪ್ರತಿಕ್ರಿಯಿಸಿದ್ದು
ಗಿರೀಶ್ ಕಾರ್ನಾಡ್
ಮಿ|| ಜಂಟಲ್ ಮ್ಯಾನ್
"ಆಡಾಡತ ಆಯುಷ್ಯ " ದಲ್ಲಿ ನಿಮ್ಮ ಪಯಣವನ್ನು ಓದಿ ಹೇಗೆ ಪ್ರತಿಕ್ರಿಯಿಸ ಬೇಕೆಂದು ತಿಳಿಯದೆ ನನ್ನಿಂದ ಶಬ್ದಗಳೇ ಹೊರಡುತ್ತಿಲ್ಲ. ನಿಮ್ಮ ಈ ಬರವಣಿಗೆಯಲ್ಲಿ ನನ್ನನ್ನು ನಾನು ಕಂಡುಕೊಳ್ಳುತ್ತಿದ್ದೇನೆ. ಕಾರಂತರ ಪಲಾಯನ , ನಿಮ್ಮ oup ನಲ್ಲಿ , ಚಿತ್ರಪಟ , ಬರವಣಿಗೆ ಹೀಗೆ ಎಲ್ಲವೂ ನನ್ನನ್ನು ಕಾಡುತ್ತವೆ. ಈ ಮೊದಲು ಕಾರಂತರನ್ನು ಓದಿ ಕೊಂಡು ನಾನು ಓಡಿದ್ದೆ. ಆದರೆ ಒಳ್ಳೆ ಸ್ನೇಹಿತನ ಮನೆಯಲ್ಲಿ ಆಶ್ರಯ ಪಡೆದು ಅಂದು ಕೊಂಡ ಕ್ಷೇತ್ರದಲ್ಲಿ ಸಣ್ಣದಾಗಿ ಪಯಣವಂತು ನಡದೇ ಇದೆ.
ಕ್ಷಮಿಸಿ ನಾನು ನಿಮ್ಮ ಮಗಳ ವಯಸ್ಸಿನವನು. ಭರವಸೆಯನ್ನು ಗಟ್ಟಿಯಾಗಿಯೇ ಇಟ್ಟುಕೊಂಡಿದ್ದೇನೆ. ನಿಮ್ಮ ಈ ಪುಸ್ತಕದ ಓದು ನನ್ನನ್ನು ಇನ್ನು ಹುರಿಗೊಳಿಸಲು ಸಹಾಯಕವಾಗಿದೆ ಎಂದು ತಿಳಿಸುತ್ತಾ ತಮ್ಮ ಮುಂದಿನ "ನೋಡುನೋಡುತ ದಿನಮಾನ" ಕಾಯುತ್ತೇನೆ. "
ಗುರುರಾಜ್
ಪ್ರಿಯ ಗುರುರಾಜ್,
ನಿಮ್ಮ ಪತ್ರಕ್ಕಾಗಿ ಆಭಾರಿ. "ಆಡಾಡತ ಆಯುಷ್ಯ " ಓದಿ ನಿಮಗೆ ಖುಷಿ ಯಾಯಿತೆಂದು ತಿಳಿದು ಸಂತೋಷವಾಯಿತು.
ಶುಭಾಶಯಗಳೊಂದಿಗೆ
ಶುಕ್ರವಾರ, ಫೆಬ್ರವರಿ 17, 2012
ಸೋಮವಾರ, ಫೆಬ್ರವರಿ 13, 2012
ಶುಕ್ರವಾರ, ಜನವರಿ 6, 2012
ಗುರುವಾರ, ಡಿಸೆಂಬರ್ 22, 2011
ಶರಣಪ್ಪ ವಡಗೇರಿ-ಜಾನಪದ
ಶರಣಪ್ಪ ವಡಗೇರಿ ಅವರು ನಮ್ಮ ಶಾಲೆಯಲ್ಲಿ ಜನಪದ ಹಾಗೂ ಸ್ವಚ್ಛತ ಕುರಿತು ಹಾಡುಗಳನ್ನು ಮಕ್ಕಳ ಮುಂದೆ ಪ್ರದರ್ಶಿಸಿದರು. ಜಾನಪದವನ್ನು ಇಂದು ಜಾಗೃತಿಗಾಗಿ ಹಳ್ಳಿ ಹಳ್ಳಿಯಲ್ಲಿ ಪ್ರದರ್ಶನವನ್ನು ನೀಡುತ್ತಿರುವ ಶರಣಪ್ಪ ವಡಗೇರಿ ಹಳ್ಳಿಗರ ಮನಸ್ಸನ್ನು ಸೆರೆ ಹಿಡಿಯುವಲ್ಲಿ ಮುಂಚುಣಿಯಲ್ಲಿದ್ದಾರೆ. ತಮ್ಮ ಮಾತಿನ - ಹಾಡಿನಲ್ಲಿ ಎಚ್ಚರ ಆಗು ಇಲ್ಲದಿದ್ದರೆ ಹಾಳಾಗಿ ಹೋಗ್ತೀಯಾ ಎಂದು ಬಡೆದಂತೆ ಓದು ಬಾರದ, ಮಕ್ಕಳು-ಹಿರಿಯರು-ತಿಳಿದವರಿಗೂ ತಮ್ಮ ಜಾನಪದದ ಹಾಡುಗಳ ಮುಖಾಂತರ ಜಾಗೃತಿಯನ್ನು ಮೂಡಿಸುವಲ್ಲಿ ಮುಂದಿದ್ದಾರೆ ಎಂದು ಹೇಳಬೇಕು. ನನಗೆ ನನ್ನ ಪ್ರೌಧಶಾಲೆಯಲ್ಲಿ ಅಭ್ಯಾಸ ಮಾಡುವ ದಿನಗಳು ನೆನಪಿಗೆ ಬರುತ್ತವೆ. ಅಬ್ದುಲ್ ಸಾಬ್ ನನ್ನ ಗೆಳೆಯರನೆಲ್ಲ ಬೀದಿನಾಟಕ ಮಾಡಲಿಕ್ಕೆ ಕರೆದುಕೊಂಡು ಹೋಗುವ ಸಮಯ, ಸಂಗೀತ ಮತ್ತು ನಾಟಕ ವಿಭಾಗದಿಂದ ಆಯ್ಕೆಗೊಂಡು ಜಿಲ್ಲೆಯಿಂದ ಜಿಲ್ಲೆಗೆ, ಹಳ್ಳಿಯಿಂದ ಹಳ್ಳಿಗೆ ಸಾಗುತ್ತಾ ಜನರ ಪ್ರೀತಿ ವಿಶ್ವಾಸ ...... ಹೇಳಲಾರದಷ್ಟು ಅನುಭವಗಳು ನನ್ನ ವಿದ್ಯಾಭ್ಯಾಸದ ದಿನಗಳಲ್ಲಿಯೇ ದೊರಕುತ್ತಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.
ಜಾನಪದದಲ್ಲಿಯೇ ತೊಡಗಿಸಿಕೊಂಡಿರುವ ಶಂಕ್ರಣ್ಣ ಸಂಕಣ್ಣನವರು ಹಾಗೂ ಶರಣಪ್ಪ ವಡಗೇರಿಯವರು ನನಗೆ ಬೆಂಗಳೂರಿನಲ್ಲಿಯೇ ಪರಿಚತರಾಗಿದ್ದರು ಇಂದು ಅವರು ಗುರುತಿಸದಂತೆ ಆಗಿದ್ದೇನೆ. ಅವರು ಹಳ್ಳಿಯ ಜನರ ಜಾಗೃತಿಯ ಕಾರ್ಯಕ್ರಮದ ನಡುವೆ ನಮ್ಮ ಶಾಲೆಗೂ ಬೇಟಿ ನೀಡಿ, ನಮ್ಮ ಮಕ್ಕಳು ನಾಟಕಗಳಲ್ಲಿ ಜಾನಪದದ ಕುರಿತು ಆಲೋಚಿಸುವಂಥ ಅವಕಾಶವನ್ನು ತೆರೆದಿಟ್ಟಿದ್ದಾರೆ. ಅವರ ಹಾಗೂ ತಂಡದವರೆಲ್ಲರಿಗೂ ನಮ್ಮ ಶಾಲೆಯ ಪರವಾಗಿ ಅಭಿನಂದನೆಗಳನ್ನು ತಿಳಿಸುತ್ತೇನೆ.
ಭಾನುವಾರ, ಡಿಸೆಂಬರ್ 18, 2011
ಕಳೆದ ದಿನಗಳು
ಕಳೆದ ದಿನಗಳು ಆ ದಿನ ಈ ದಿನವೆಂದು ಹುಡುಕುತ್ತಲೇ
ನಾನು ಇಲ್ಲಿವರೆಗೂ ಸಾಗಿದ್ದಾಯಿತು. ಆದರೆ ಆ ದಿನಗಳೆಂದು ಮರಲಿಬರದಾಗಿದೆ
ಬರಿ ಹೊಸ ದಿನಗಳೇ
ನಾನು ಇಲ್ಲಿವರೆಗೂ ಸಾಗಿದ್ದಾಯಿತು. ಆದರೆ ಆ ದಿನಗಳೆಂದು ಮರಲಿಬರದಾಗಿದೆ
ಬರಿ ಹೊಸ ದಿನಗಳೇ
ಗುರುವಾರ, ಡಿಸೆಂಬರ್ 15, 2011
ಇಂದಿನ ವಿದ್ಯಾಭ್ಯಾಸ
ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ. ಮಗುವಿಗೆ ಒಳ್ಳೆಯ ಸಂಸ್ಕಾರ ಸಿಗಲು ಶಿಕ್ಷಣವು ಬೇಕಾಗುತ್ತದೆ. ಪ್ರಾಚಿನ ಕಾಲಕ್ಕೆ ನಮ್ಮ ಇಂದಿನ ಶಿಕ್ಷಣವನ್ನು ಹೋಲಿಸಿದರೆ .... ಇತ್ತಿಚಿಗೆ ಜಾರಿಗೆ ಬಂದ ತ್ರೈ ಮಾಸಿಕ ಶಿಕ್ಷಣ ಪದ್ಧತಿಯಂತು ಮಕ್ಕಳಿಗೆ ಹೆಚ್ಚಿನ ಜ್ಞಾನವನ್ನು ಒದಗಿಸುವುದಿಲ್ಲ . ವಿದ್ಯಾರ್ಥಿಗಳಿಗೆ ಉತ್ತಿರ್ಣರಾಗಲು ಸುಲುಭ ಮಾರ್ಗವಾಗಿದೆ. ಕಲಿಕೆಯಲ್ಲಿ ಹಿಂದೆ ಇರುವ ಮಕ್ಕಳಿಗೆ ಇದು ಸುಲುಭವಾಗುತ್ತದೆ
ಭೀಮಪ್ಪ ಕಲ್ಲೂರ, ೧೦ನೇ ತರಗತಿ
ಭೀಮಪ್ಪ ಕಲ್ಲೂರ, ೧೦ನೇ ತರಗತಿ
ಸೋಮವಾರ, ಡಿಸೆಂಬರ್ 12, 2011
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)

.jpg)
.jpg)
.jpg)
.jpg)
.jpg)
.jpg)
.jpg)

